ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
Cross references
ಅವುಗಳನ್ನು ಯಾಜಕನು ನೋಡಬೇಕು. ಇಗೋ, ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಮೊಬ್ಬಾಗಿ ಬಿಳು ಪಾಗಿದ್ದರೆ ಅದು ಚರ್ಮದ ಮೇಲೆ ಬಿಸಿಲಿನಿಂದಾದ ಮಚ್ಚೆಯಾಗಿರುವದು. ಅವನು ಶುದ್ಧನಾಗಿರುವನು.
ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ
ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.
ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.
ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.