ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
Cross references
ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್).
ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
ಆಗ ಯೆಪ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ ಎಫ್ರಾಯಾಮ್ಯರ ಸಂಗಡ ಯುದ್ಧ ಮಾಡಿ ದನು. ಗಿಲ್ಯಾದ್ಯರಾದ ನೀವು ಎಫ್ರಾಯಾಮ್ ಮನಸ್ಸೆ ಯವರೊಳಗಿಂದ ತಪ್ಪಿಸಿಕೊಂಡ ಎಫ್ರಾಯಾಮ್ಯರು ಎಂದು ಎಫ್ರಾಯಾಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯಾಮ್ಯರನ್ನು ಹೊಡೆದರು.
ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು.
ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.
ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು.
ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.
ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.
ಆದರೆ ಇಸ್ರಾ ಯೇಲ್ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು.
ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರ ಹೇಳಿದನು; ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ಬಿಟ್ಟು ಯೌವ ನಸ್ಥರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ--
ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.
ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.
ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.
ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.