ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?
Cross references
ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?
ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.