ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
Cross references
ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.
ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
ದೇವರ ಚಿತ್ತವಾದರೆ ಹೀಗೆ ಮಾಡುವೆವು.