ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
Cross references
ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು.
ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
ದುಷ್ಟರ ಮನಸ್ಸು ಕೇಡನ್ನು ಅಪೇಕ್ಷಿಸುತ್ತದೆ; ಅವನ ದೃಷ್ಟಿಯಲ್ಲಿ ತನ್ನ ನೆರೆಯವನು ಯಾವ ದಯೆ ಯನ್ನು ಕಂಡುಕೊಳ್ಳುವದಿಲ್ಲ.
ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ.
ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.