ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
Cross references
ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.
ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ.
ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.