ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
Cross references
ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
ಆಗ ದಾವೀದನು ಗಾದ ನಿಗೆ--ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಕರ್ತನ ಕೈಯಲ್ಲಿ ಬೀಳುತ್ತೇನೆ; ಯಾಕಂದರೆ ಆತನ ಕರುಣೆಯು ಬಹಳವಾಗಿರುವದು; ಆದರೆ ಮನುಷ್ಯನ ಕೈಯಲ್ಲಿ ಬೀಳಲಾರೆನು ಅಂದನು.
ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.
ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.
ಅವನಿಗೆ ಏಳುಮಂದಿ ಕುಮಾ ರರೂ ಮೂರು ಮಂದಿ ಕುಮಾರ್ತೆಯರೂ ಹುಟ್ಟಿ ದರು.
ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.
ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ.
ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು.
ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.
ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.
ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.