ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
Cross references
ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.
ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು.
ಸೇವಕನು ನೆರಳನ್ನು ಅಪೇಕ್ಷಿಸುವ ಪ್ರಕಾರವೂ ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾ ರವೂ
ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ
ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ,
ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.
ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ.