ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
Cross references
ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.
ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.