ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
Cross references
ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.
ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.