ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
Cross references
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ;
ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು.
ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು.
ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು.
ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.
ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.
ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.