ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
Cross references
ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.
ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.
ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ.
ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.
ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.