ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
Cross references
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.
ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.
ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.
ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.
ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ.
ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.
ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು.
ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ