ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
Cross references
ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ.
ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--
ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.
ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.