ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
Cross references
ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;