ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
Cross references
ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪಸುಡುವದಕ್ಕಾಗಿ ಎತ್ತರ ಸ್ಥಳಗಳನ್ನು ಕಟ್ಟಿಸಿ ತನ್ನ ಪಿತೃಗಳ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದನು.
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.