ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
Cross references
ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ.
ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ.
ನೀವು ಎಲೆ ಬಾಡಿದ ಏಲಾಮರದಂತೆಯೂ ನೀರಿಲ್ಲದ ತೋಟದಂತೆಯೂ ಇರುವಿರಿ.ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!
ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ?
ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.