ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.
Cross references
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.
ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು.
ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.
ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.
ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ
ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.