ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
Cross references
ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.
ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.
ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.