ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
Cross references
ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.
ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.
ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.
ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.