ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
Cross references
ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.
ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ.
ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ.
ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.