ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ.
Cross references
ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ.
ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ
ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.
ನಮ್ಮ ಕುತ್ತಿಗೆಗಳು ಹಿಂಸೆಗೊಳ ಗಾದವು; ನಾವು ವಿಶ್ರಾಂತಿಯಿಲ್ಲದೆ ಕಷ್ಟಪಡುತ್ತೇವೆ.
ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
ನಿನ್ನ ಸಹೋದರಿಯಾದ ಸೊದೋಮ್ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.
ಕರ್ತನು ಯಾಕೋಬನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ತಿರುಗಿಸಿಬಿಟ್ಟಿ ದ್ದಾನೆ; ಬರಿದು ಮಾಡುವವರು ಅವರನ್ನು ಬರಿದು ಮಾಡಿ ಅವರ ದ್ರಾಕ್ಷೇ ಬಳ್ಳಿಗಳನ್ನು ಕೆಡಿಸಿದ್ದಾರೆ.
ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.