ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
Cross references
ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು.
ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ.
ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ
ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.
ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.
ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;
ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.
ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.