ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
Cross references
ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.
ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.
ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.