ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.
Cross references
ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು.
ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.
ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು.
ಹೀಗಾದ ಮೇಲೆ ಯೋಬನು ತನ್ನ ಬಾಯಿತೆರದು ತನ್ನ ದಿವಸವನ್ನು ಶಪಿಸಿದನು.
ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ?
ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.
ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.