ಆದದರಿಂದ ಇಗೋ, ಕರ್ತನು ಹೇಳುವದೇ ನಂದರೆ--ಇಗೋ, ಇಸ್ರಾಯೇಲಿನ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಇನ್ನು ಹೇಳುವದಿಲ್ಲ;
Cross references
ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು.
ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.
ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.