ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.
Cross references
ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.
ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ,
ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.
ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
ಆತನ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ.
ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.