ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
Cross references
ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
ಮೋಶೆಗೆ--ನಾನೇ ಕರ್ತನು, ನಾನು ನಿನಗೆ ಹೇಳುವದನ್ನೆಲ್ಲಾ ಐಗುಪ್ತದ ಅರಸನಾದ ಫರೋಹನಿಗೆ ತಿಳಿಸು ಅಂದನು.ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.
ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ
ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.
ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.
ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.
ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು.
ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.