ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
Cross references
ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.
ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.
ಆತನು ಎರಡನೆಯ ಮುದ್ರೆಯನ್ನು ತೆರೆದಾಗ ಎರಡನೆಯ ಜೀವಿಯು--ಬಂದು ನೋಡು ಅನ್ನುವ ದನ್ನು ಕೇಳಿದೆನು.
ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.