ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
Cross references
ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.
ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.
ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.