ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
Cross references
ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
ಅಕ್ರಮಗಳು ನನಗೆ ವಿರೋಧವಾಗಿ ಬಲಗೊಂಡಿವೆ; ನಮ್ಮ ದ್ರೋಹಗಳನ್ನಾದರೋ ನೀನು ತೊಳೆದು ಬಿಡುವಿ.
ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.
ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು?
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.
ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.
ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.