ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.
Cross references
ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ
ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.
ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.
ಆದದರಿಂದ ಇಗೋ, ಕರ್ತನು ಹೇಳುವದೇ ನಂದರೆ--ಇಗೋ, ಇಸ್ರಾಯೇಲಿನ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಇನ್ನು ಹೇಳುವದಿಲ್ಲ;
ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.
ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು.ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;