ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
Cross references
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ.
ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;
ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ
ಹೀಗೆ ಯೆರೆವಿಾಯನು ಈ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು.
ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.
ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.