ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.
Cross references
ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.
ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.
ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.
ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.
ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.
ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.