Home Bibles ಯೆರೆಮಿಯ 19:7 · ಕನ್ನಡ ಬೈಬಲ್
ಯೆರೆಮಿಯ 19:7 · ಕನ್ನಡ ಬೈಬಲ್

ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.

Cross references

ಲೇವ್ಯಕಾಂಡ 26:17

ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.

ಲೇವ್ಯಕಾಂಡ 26:25

ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.

ದ್ವಿತೀಯೋಪದೇಶಕಾಂಡ 28:25

ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.

1 ಸಮುವೇಲ 17:46

ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.

2 ಅರಸುಗಳು 21:14

ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.

ಯೋಬ 5:12

ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.

ಕೀರ್ತನೆಗಳು 33:10

ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.

ಕೀರ್ತನೆಗಳು 79:2

ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.

ಸಾಮೇತಿಗಳು 21:30

ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.

ಯೆಶಾಯ 8:10

ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.

ಯೆಶಾಯ 28:17

ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.

ಯೆಶಾಯ 29:14

ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.

ಯೆಶಾಯ 30:1

ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

ಯೆರೆಮಿಯ 8:2

ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.

ಯೆರೆಮಿಯ 9:21

ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.

ಯೆರೆಮಿಯ 15:2

ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;

ಯೆರೆಮಿಯ 15:9

ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.

ಯೆರೆಮಿಯ 16:4

ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.

ಯೆರೆಮಿಯ 21:7

ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.

ಯೆರೆಮಿಯ 22:19

ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.

ಯೆರೆಮಿಯ 22:25

ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.

ವಿಲಾಪಗಳು 3:37

ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?

ರೋಮಾಪುರದವರಿಗೆ 3:31

ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.

ರೋಮಾಪುರದವರಿಗೆ 4:14

ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.

ಪ್ರಕಟನೆ 19:18

ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.

Interlinear

Choose Theme