ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
Cross references
ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.
ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.
ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.
ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.
ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.