ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
Cross references
ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;