ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
Cross references
ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.
ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು.
ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.
ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ; ಯುದ್ಧದಿಂದ ತಿರುಗಿಕೊಂಡು ಭದ್ರವಾಗಿ ಹಾದುಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊ ಳ್ಳುತ್ತೀರಿ.
ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.