ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
Cross references
ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ
ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.
ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.
ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.
ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು.
ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೂ ಇಸ್ರಾಯೇಲಿನ ಮನೆತನದ ವರ ಪಾಪಗಳ ನಿಮಿತ್ತವೂ ಆಯಿತು; ಯಾಕೋಬಿನ ಅಪರಾಧವೇನು? ಸಮಾರ್ಯವಲ್ಲವೋ? ಯೆಹೂ ದದ ಉನ್ನತಸ್ಥಳಗಳೇನು? ಯೆರೂಸಲೇಮಲ್ಲವೋ?