ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
Cross references
ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.
ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು.
ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.
ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.
ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.
ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.