ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
Cross references
ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು.
ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?
ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.
ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು.
ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.