ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
Cross references
ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ.
ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು.
ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು.
ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!
ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ
ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.