ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
Cross references
ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.
ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು.
ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.