ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
Cross references
ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ
ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
ಫರೋಹನು ಅವನಿಗೆ -- ಯಾಕೆ? ಇಗೋ, ನೀನು ನಿನ್ನ ದೇಶಕ್ಕೆ ಹೋಗಬೇಕೆಂಬುವ ಹಾಗೆ ನೀನು ನನ್ನ ಸಂಗಡ ಇರುವಾಗ ನಿನಗೆ ಏನು ಕೊರತೆಯಾಯಿತು ಅಂದಾಗ ಅವನು--ಏನೂ ಇಲ್ಲ; ಆದರೆ ಹೇಗಾದರೂ ನಾನು ಅಲ್ಲಿಗೆ ಹೋಗುತ್ತೇನೆ ಅಂದನು.
ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.
ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ;
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.
ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
ತೆಕೋವದ ಕುರುಬರಲಿದ್ದ ಆಮೋಸನು ಯೆಹೂದದ ಅರಸನಾದ ಉಜ್ಜೀಯನ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ದಿನಗಳ ಲ್ಲಿಯೂ ಭೂಕಂಪಕ್ಕೆ ಎರಡು ವರುಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ನೋಡಿದ ವಾಕ್ಯಗಳು.
ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ.
ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.
ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.