ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
Cross references
ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.
ಅವನು ವಾಲೆಯನ್ನೂ ತನ್ನ ಸಹೋದರಿಯ ಕೈಗಳಲ್ಲಿದ್ದ ಕಡಗಗಳನ್ನೂ ನೋಡಿ ಆ ಮನುಷ್ಯನು ತನ್ನ ಕೂಡ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿಯಾದ ರೆಬೆಕ್ಕಳ ಮಾತುಗಳನ್ನು ಕೇಳಿ ಆ ಮನುಷ್ಯನ ಬಳಿಗೆ ಬಂದನು. ಇಗೋ, ಅವನು ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.
ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ಸುತ್ತಲೂ ಇದ್ದ ತಮ್ಮ ಎಲ್ಲಾ ಶತ್ರುಗಳ ಕೈಯಿಂದ ತಮ್ಮನ್ನು ತಪ್ಪಿಸಿಬಿಟ್ಟ ತಮ್ಮ ದೇವರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳ ಲಿಲ್ಲ.ಇಲ್ಲವೆ ಗಿದ್ಯೋನನೆಂಬ ಯೆರುಬ್ಬಾಳ್ ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ಅವರು ಅವನ ಮನೆಯವರಿಗೆ ದಯೆ ತೋರಿಸಲಿಲ್ಲ.
ಇಸ್ರಾಯೇಲಿನ ಕುಮಾರ್ತೆ ಯರೇ, ಸೌಲನಿಗೋಸ್ಕರ ಅಳಿರಿ, ನಿಮಗೆ ರಕ್ತಾಂಬರ ವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ; ನಿಮ್ಮ ಉಡುಗೆ ಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.
ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.
ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ , ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.