ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
Cross references
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.
ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು.
ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.
ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.
ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.