ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
Cross references
ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.
ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.
ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.
ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ.
ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು
ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.
ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.
ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.
ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು.
ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.
ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.