Cross references
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.
ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.
ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.
ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.