ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
Cross references
ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
ಓ ಇಸ್ರಾಯೇಲೇ, ನಿನ್ನ ಪ್ರವಾದಿಗಳು ನಿರ್ಜನ ಸ್ಥಳಗಳಲ್ಲಿರುವ ನರಿಗಳ ಹಾಗೆ ಇದ್ದಾರೆ.
ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ