ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;
Cross references
ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.
ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ
ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ.
ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.
ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ.
ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ.
ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ;
ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.